Mar 082013
 

ಆತ್ಮೀಯರೆ,

ಅಮೆರಿಕದ ಏಕೈಕ ರಾಷ್ಟ್ರೀಯ ಕನ್ನಡ ಸಾಹಿತ್ಯ ಸ೦ಸ್ಥೆ `ಕನ್ನಡ ಸಾಹಿತ್ಯ ರ೦ಗ’ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ‘ವಸಂತ ಸಾಹಿತ್ಯೋತ್ಸವ’ ಅಮೆರಿಕದಲ್ಲಿ ನಡೆಯುವ ಅಪೂರ್ವ ಕನ್ನಡ ಸಾಹಿತ್ಯ ಸಮ್ಮೇಳನವಾಗಿದೆ. ಕಸಾರ೦ ನಡೆಸುವ ವಸ೦ತ ಸಾಹಿತ್ಯೋತ್ಸವಗಳು ತಮ್ಮ ವೈಶಿಷ್ಟ್ಯಪೂರ್ಣ ಸಾಹಿತ್ಯ ಕಾರ್ಯಕ್ರಮಗಳಿಗೆ, ಗ೦ಭೀರ ಸಾಹಿತ್ಯ ಚರ್ಚೆ ಮತ್ತು ಆಸ್ವಾದನೆಗೆ ಹೆಸರಾಗಿವೆ. ಕನ್ನಡ ಸಾಹಿತ್ಯಾಸಕ್ತರಿಗೆ ಈ ಸಮ್ಮೇಳನಗಳು ಒ೦ದು ಮೌಲಿಕವಾದ ವೇದಿಕೆಯನ್ನು ನಿರ್ಮಿಸಿವೆ.ಕನ್ನಡ ಸಾಹಿತ್ಯ ರಂಗಕ್ಕೆ ಈಗ ೧೦ ವರ್ಷಗಳ ವಿಶೇಷ . ‘ಕಸಾರಂ’ನ ೬ನೇ ವಸ೦ತ ಸಾಹಿತ್ಯೋತ್ಸವ ಇದೇ ಮೇ ೧೮-೧೯, ೨೦೧೩ ರ೦ದು ಹ್ಯೂಸ್ಟನ್ ಕನ್ನಡ ವೃ೦ದದ ಸಹಯೋಗದಲ್ಲಿ ಮತ್ತು ಟೆಕ್ಸಸ್ ಕನ್ನಡಿಗರೆಲ್ಲರ ಆಶ್ರಯದಲ್ಲಿ ಹ್ಯೂಸ್ಟನ್ನಿನಲ್ಲಿ ನಡೆಯುತ್ತಿದೆ. ಕನ್ನಡದ ವಿಶಿಷ್ಟ ಲೇಖಕ, ಭಾಷಾವಿಜ್ಞಾನಿ ಪ್ರೊ. ಕೆ.ವಿ. ತಿರುಮಲೇಶ್ ಅವರು ಈ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಹೆಚ್ಚಿನ ವಿವರಗಳಿಗೆ
www.kannadasahityaranga.org ಅಥವ KannadaVrinda.org/conference ತಾಣವನ್ನು ನೋಡಿ.

ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾ೦ಗಣದಲ್ಲಿ ಶನಿವಾರ ಬೆಳಿಗ್ಗೆಯಿ೦ದ ಭಾನುವಾರ ಮಧ್ಯಾಹ್ನದವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಪ್ರತಿಬಾರಿಯಂತೆ ಈ ಸಲವೂ ಅಮೆರಿಕದ ಕನ್ನಡ ಬರಹಗಾರರನ್ನು ಮತ್ತು ಅವರ ಇತ್ತೀಚಿನ ಕೃತಿಗಳನ್ನು ‘ನಮ್ಮ ಹೆಮ್ಮೆಯ ಬರಹಗಾರರು’ ಕಾರ್ಯಕ್ರಮದಲ್ಲಿ ಸಾಹಿತ್ಯಪ್ರಿಯರಿಗೆ ಪರಿಚಯ ಮಾಡಿಕೊಡಲು ನಾವು ಉತ್ಸುಕರಾಗಿದ್ದೇವೆ. ಲೇಖಕರು ತಮ್ಮ ಹೊಸ ಪುಸ್ತಕಗಳನ್ನು ಇಲ್ಲಿ ಬಿಡುಗಡೆ ಮಾಡುವ ಅವಕಾಶವೂ ಉಂಟು.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕೆಲವು ನಿಯಮಗಳು ಹೀಗಿವೆ:

– ಕನ್ನಡದ ಪುಸ್ತಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪುಸ್ತಕವು ಸಾಹಿತ್ಯ, ವಿಜ್ಞಾನ, ಪರಿಸರ, ಆರೋಗ್ಯ, ಅನುವಾದ, ಮಕ್ಕಳ ಸಾಹಿತ್ಯ.. ಹೀಗೆ ಯಾವುದೇ ಪ್ರಕಾರಕ್ಕೂ ಸೇರಿದ್ದಾಗಿರಬಹುದು.
– ಪುಸ್ತಕಗಳು 2011 ಏಪ್ರಿಲ್ ತಿಂಗಳ ನಂತರ ಪ್ರಕಟಗೊಂಡಿರಬೇಕು.
– ಪುಸ್ತಕಗಳ ಬಿಡುಗಡೆ, ವಿಮರ್ಶೆಗಳನ್ನು ಅಪೇಕ್ಷಿಸುವ ಲೇಖಕರು ಸಮ್ಮೇಳನದಲ್ಲಿ ಉಪಸ್ಥಿತರಾಗಿರಬೇಕು.
– ಪುಸ್ತಕ ಬಿಡುಗಡೆ/ವಿಮರ್ಶೆಗಳ ಆಯ್ಕೆಯಲ್ಲಿ ಕಸಾರಂ ತೀರ್ಮಾನ ಅಂತಿಮ.
– ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಲೇಖಕರು ಏಪ್ರಿಲ್ ೧೫ ರ ಒಳಗೆ ನಮ್ಮನ್ನು ಸಂಪರ್ಕಿಸಿ, ನಿಮ್ಮ ಕೃತಿಗಳನ್ನು ಕಳಿಸಬೇಕು.
– ನಮ್ಮ ಪುಸ್ತಕ ಮಳಿಗೆಯಲ್ಲಿ ನಿಮ್ಮ ಪುಸ್ತಕಗಳ ಮಾರಾಟ ಮಾಡಬಹುದು.
– ಸಂಪರ್ಕ ವಿಳಾಸ bhameera@gmail.com

ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸ೦ಖ್ಯೆಯಲ್ಲಿ ‘ವಸಂತ ಸಾಹಿತ್ಯೋತ್ಸವ’ದಲ್ಲಿ ಪಾಲ್ಗೊಂಡು ಸಮ್ಮೇಳನದ ಸಂಭ್ರಮ ಹೆಚ್ಚಿಸಬೇಕೆಂದು ಕೋರುತ್ತಿದ್ದೇವೆ. ಸಮ್ಮೇಳನದ ಬಗೆಗಿನ ಹೆಚ್ಚಿನ ವಿವರಗಳು ಇಲ್ಲಿವೆ:-

http://kannadavrinda.org/Conference/Default.aspx

ನಿಮಗೆ ಇನ್ನೇನಾದರೂ ಹೆಚ್ಚಿನ ವಿವರಗಳು ಬೇಕಿದ್ದರೆ ದಯವಿಟ್ಟು ನಮ್ಮನ್ನು ಸ೦ಪರ್ಕಿಸಿ.

ವಿಶ್ವಾಸಪೂರ್ವಕವಾಗಿ,
ಮೀರಾ ಪಿ. ಆರ್.

 Posted by at 7:42 PM
Mar 082013
 

ಆತ್ಮೀಯರೆ,

ಅಮೆರಿಕದ ಏಕೈಕ ರಾಷ್ಟ್ರೀಯ ಕನ್ನಡ ಸಾಹಿತ್ಯ ಸ೦ಸ್ಥೆ `ಕನ್ನಡ ಸಾಹಿತ್ಯ ರ೦ಗ’ ಪ್ರತಿ ಎರಡು ವರ್ಷಕ್ಕೊಮ್ಮೆ ನಡೆಸುವ ‘ವಸಂತ ಸಾಹಿತ್ಯೋತ್ಸವ’ ಅಮೆರಿಕದಲ್ಲಿ ನಡೆಯುವ ಅಪೂರ್ವ ಕನ್ನಡ ಸಾಹಿತ್ಯ ಸಮ್ಮೇಳನವಾಗಿದೆ. ಕಸಾರ೦ ನಡೆಸುವ ವಸ೦ತ ಸಾಹಿತ್ಯೋತ್ಸವಗಳು ತಮ್ಮ ವೈಶಿಷ್ಟ್ಯಪೂರ್ಣ ಸಾಹಿತ್ಯ ಕಾರ್ಯಕ್ರಮಗಳಿಗೆ, ಗ೦ಭೀರ ಸಾಹಿತ್ಯ ಚರ್ಚೆ ಮತ್ತು ಆಸ್ವಾದನೆಗೆ ಹೆಸರಾಗಿವೆ. ಕನ್ನಡ ಸಾಹಿತ್ಯಾಸಕ್ತರಿಗೆ ಈ ಸಮ್ಮೇಳನಗಳು ಒ೦ದು ಮೌಲಿಕವಾದ ವೇದಿಕೆಯನ್ನು ನಿರ್ಮಿಸಿವೆ.ಕನ್ನಡ ಸಾಹಿತ್ಯ ರಂಗಕ್ಕೆ ಈಗ ೧೦ ವರ್ಷಗಳ ವಿಶೇಷ . ‘ಕಸಾರಂ’ನ ೬ನೇ ವಸ೦ತ ಸಾಹಿತ್ಯೋತ್ಸವ ಇದೇ ಮೇ ೧೮-೧೯, ೨೦೧೩ ರ೦ದು ಹ್ಯೂಸ್ಟನ್ ಕನ್ನಡ ವೃ೦ದದ ಸಹಯೋಗದಲ್ಲಿ ಮತ್ತು ಟೆಕ್ಸಸ್ ಕನ್ನಡಿಗರೆಲ್ಲರ ಆಶ್ರಯದಲ್ಲಿ ಹ್ಯೂಸ್ಟನ್ನಿನಲ್ಲಿ ನಡೆಯುತ್ತಿದೆ. ಕನ್ನಡದ ವಿಶಿಷ್ಟ ಲೇಖಕ, ಭಾಷಾವಿಜ್ಞಾನಿ ಪ್ರೊ. ಕೆ.ವಿ. ತಿರುಮಲೇಶ್ ಅವರು ಈ ಸಮ್ಮೇಳನದ ಮುಖ್ಯ ಅತಿಥಿಯಾಗಿ ಆಗಮಿಸಲಿದ್ದಾರೆ. ಹೆಚ್ಚಿನ ವಿವರಗಳಿಗೆ
www.kannadasahityaranga.org ಅಥವ KannadaVrinda.org/conference ತಾಣವನ್ನು ನೋಡಿ.

ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾ೦ಗಣದಲ್ಲಿ ಶನಿವಾರ ಬೆಳಿಗ್ಗೆಯಿ೦ದ ಭಾನುವಾರ ಮಧ್ಯಾಹ್ನದವರೆಗೆ ನಡೆಯುವ ಈ ಸಮ್ಮೇಳನದಲ್ಲಿ ಪ್ರತಿಬಾರಿಯಂತೆ ಈ ಸಲವೂ ಅಮೆರಿಕದ ಕನ್ನಡ ಬರಹಗಾರರನ್ನು ಮತ್ತು ಅವರ ಇತ್ತೀಚಿನ ಕೃತಿಗಳನ್ನು ‘ನಮ್ಮ ಹೆಮ್ಮೆಯ ಬರಹಗಾರರು’ ಕಾರ್ಯಕ್ರಮದಲ್ಲಿ ಸಾಹಿತ್ಯಪ್ರಿಯರಿಗೆ ಪರಿಚಯ ಮಾಡಿಕೊಡಲು ನಾವು ಉತ್ಸುಕರಾಗಿದ್ದೇವೆ. ಲೇಖಕರು ತಮ್ಮ ಹೊಸ ಪುಸ್ತಕಗಳನ್ನು ಇಲ್ಲಿ ಬಿಡುಗಡೆ ಮಾಡುವ ಅವಕಾಶವೂ ಉಂಟು.

ಈ ಕಾರ್ಯಕ್ರಮಕ್ಕೆ ಸಂಬಂಧಿಸಿದ ಕೆಲವು ನಿಯಮಗಳು ಹೀಗಿವೆ:

– ಕನ್ನಡದ ಪುಸ್ತಕಗಳನ್ನು ಮಾತ್ರ ಪರಿಗಣಿಸಲಾಗುವುದು. ಪುಸ್ತಕವು ಸಾಹಿತ್ಯ, ವಿಜ್ಞಾನ, ಪರಿಸರ, ಆರೋಗ್ಯ, ಅನುವಾದ, ಮಕ್ಕಳ ಸಾಹಿತ್ಯ.. ಹೀಗೆ ಯಾವುದೇ ಪ್ರಕಾರಕ್ಕೂ ಸೇರಿದ್ದಾಗಿರಬಹುದು.
– ಪುಸ್ತಕಗಳು 2011 ಏಪ್ರಿಲ್ ತಿಂಗಳ ನಂತರ ಪ್ರಕಟಗೊಂಡಿರಬೇಕು.
– ಪುಸ್ತಕಗಳ ಬಿಡುಗಡೆ, ವಿಮರ್ಶೆಗಳನ್ನು ಅಪೇಕ್ಷಿಸುವ ಲೇಖಕರು ಸಮ್ಮೇಳನದಲ್ಲಿ ಉಪಸ್ಥಿತರಾಗಿರಬೇಕು.
– ಪುಸ್ತಕ ಬಿಡುಗಡೆ/ವಿಮರ್ಶೆಗಳ ಆಯ್ಕೆಯಲ್ಲಿ ಕಸಾರಂ ತೀರ್ಮಾನ ಅಂತಿಮ.
– ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಛಿಸುವ ಲೇಖಕರು ಏಪ್ರಿಲ್ ೧೫ ರ ಒಳಗೆ ನಮ್ಮನ್ನು ಸಂಪರ್ಕಿಸಿ, ನಿಮ್ಮ ಕೃತಿಗಳನ್ನು ಕಳಿಸಬೇಕು.
– ನಮ್ಮ ಪುಸ್ತಕ ಮಳಿಗೆಯಲ್ಲಿ ನಿಮ್ಮ ಪುಸ್ತಕಗಳ ಮಾರಾಟ ಮಾಡಬಹುದು.

– ಸಂಪರ್ಕ ವಿಳಾಸ bhameera@gmail.com

ಕನ್ನಡ ಸಾಹಿತ್ಯಾಸಕ್ತರು ಹೆಚ್ಚಿನ ಸ೦ಖ್ಯೆಯಲ್ಲಿ ‘ವಸಂತ ಸಾಹಿತ್ಯೋತ್ಸವ’ದಲ್ಲಿ ಪಾಲ್ಗೊಂಡು ಸಮ್ಮೇಳನದ ಸಂಭ್ರಮ ಹೆಚ್ಚಿಸಬೇಕೆಂದು ಕೋರುತ್ತಿದ್ದೇವೆ.
ನಿಮಗೆ ಇನ್ನೇನಾದರೂ ಹೆಚ್ಚಿನ ವಿವರಗಳು ಬೇಕಿದ್ದರೆ ದಯವಿಟ್ಟು ನಮ್ಮನ್ನು ಸ೦ಪರ್ಕಿಸಿ.

ವಿಶ್ವಾಸಪೂರ್ವಕವಾಗಿ,
ಮೀರಾ ಪಿ. ಆರ್.

 Posted by at 7:39 PM
Mar 072013
 

‘ಕನ್ನಡ ಸಾಹಿತ್ಯ ರಂಗ’ದ ಆರನೆಯ ವಸಂತ ಸಾಹಿತ್ಯೋತ್ಸವ – ಕವಿ ಗೋಷ್ಠಿ

ಅಮೆರಿಕಾದ ಏಕೈಕ ರಾಷ್ಟ್ರೀಯ ಕನ್ನಡ ಸಾಹಿತ್ಯ ಸಂಸ್ಥೆಯಾದ ‘ಕನ್ನಡ ಸಾಹಿತ್ಯ ರಂಗ’ ಕ್ಕೆ(ಕಸಾರಂ) ಇದೀಗ ಹತ್ತು ವರ್ಷ ತುಂಬಿದೆ. ಬರುವ ಮೇ ೧೮ ಮತ್ತು ೧೯ರಂದು ‘ಕಸಾರಂ’ ತನ್ನ ದಶಮಾನೋತ್ಸವ ಹಾಗೂ ೬ನೆಯ ವಸಂತ ಸಾಹಿತ್ಯೋತ್ಸವವನ್ನು ಹ್ಯೂಸ್ಟನ್ನಿನಲ್ಲಿ ಟೆಕ್ಸಸ್ ಕನ್ನಡಿಗರ ಆಶ್ರಯದಲ್ಲಿ ಆಚರಿಸುತ್ತಿದೆ. ಸುಪ್ರಸಿದ್ಧ ಸ್ಠಳೀಯ ಕನ್ನಡ ಸಂಸ್ಥೆಯಾದ ‘ಹ್ಯೂಸ್ಟನ್ ಕನ್ನಡ ವೃಂದ’ ಈ ಸಂಘಟನೆಯಲ್ಲಿ ಸಹಪ್ರವರ್ತಕ ಪಾತ್ರ ವಹಿಸಿದೆ. ಟೆಕ್ಸಸ್ ರಾಜ್ಯದ ಇತರ ಹೆಸರಾಂತ ಕನ್ನಡ ಸಂಸ್ಥೆಗಳಾದ – ಆಸ್ಟಿನ್ ಕನ್ನಡ ಕೂಟ, ಸ್ಯಾನ್ ಆಂಟೋನಿಯೋದ ಕುವೆಂಪು ಕನ್ನಡ ಕೂಟ, ಡಲ್ಲಾಸ್‍ನ ಮಲ್ಲಿಗೆ ಕನ್ನಡ ಕೂಟ, ಮತ್ತು ರಿಯೋ ಗ್ರ್ಯಾಂಡ್ ವ್ಯಾಲಿಯ ಕನ್ನಡಕೂಟ – ಇವು ಈ ಸಮ್ಮೇಳನಕ್ಕೆ ತುಂಬು ಹೃದಯದಿಂದ ತಮ್ಮ ಸಹಕಾರ ಹಸ್ತವನ್ನು ಚಾಚುತ್ತಿವೆ. ರೈಸ್ ಯೂನಿವರ್ಸಿಟಿಯ ಹ್ಯಾಮನ್ ಹಾಲ್ ಸಭಾಂಗಣದಲ್ಲಿ ನಡೆಯುವ ಈ ಸಾಹಿತ್ಯ ಸಮಾರಂಭದ ಅಂಗವಾಗಿ ನಡೆಯುವ ಕವಿ ಗೋಷ್ಠಿಯಲ್ಲಿ ನಿಮ್ಮ ಕವನಗಳನ್ನು ಓದಲು ಇದೋ ಇಲ್ಲಿದೆ ಪ್ರೀತಿಯ ಕರೆಯೋಲೆ. ಹೆಸರು ’ಕವಿ ಗೋಷ್ಠಿ’ಯಾದರೂ ಗದ್ಯ ಓದಲು ಅಡ್ಡಿ ಏನಿಲ್ಲ! ನಿಮ್ಮ ಕಂಪ್ಯೂಟರ್ ಕೀಲಿ ಮಣೆಯಲ್ಲಿ ಅಥವಾ ಲೇಖನಿಯಲ್ಲಿ ಹರಿದು ಬಂದ ಸರಸ್ವತಿಯ ನಾದ ಮಾಧುರ್ಯಕ್ಕೆ ಇಲ್ಲಿದೆ ಅಭಿವ್ಯಕ್ತಿಯ ವೇದಿಕೆ.

ಕವಿ ಗೋಷ್ಠಿಯಲ್ಲಿ ಭಾಗವಹಿಸಲು ಇಚ್ಛಿಸುವವರು ಈ ಕೆಳಗಿನ ಅಂಶಗಳನ್ನು ಗಮನಿಸಬೇಕಾಗಿ ವಿನಂತಿ:

ಪ್ರತಿಯೊಬ್ಬರಿಗೂ ಕವನ ವಾಚನಕ್ಕೆ ಐದು ನಿಮಿಷ ಹಾಗೂ ಗದ್ಯ ವಾಚನಕ್ಕೆ ಏಳು ನಿಮಿಷ ಕಾಲಾವಧಿ ನೀಡಲಾಗುತ್ತದೆ.

ನಿಮ್ಮ ರಚನೆಯನ್ನು ನೀವೇ ಓದಬೇಕು.

ನೀವು ಓದಬೇಕೆಂದಿರುವ ಸಾಹಿತ್ಯವನ್ನು ‘ಬರಹ’ ದಲ್ಲಿ ಟೈಪ್ ಮಾಡಿ ಮುಂಚಿತವಾಗಿ ನಮಗೆ ಕಳಿಸಿಕೊಡಿ.

ನಿಮ್ಮ ರಚನೆಯನ್ನು ಕಳಿಸಲು ಕೊನೆಯ ದಿನಾಂಕ ಏಪ್ರಿಲ್ ೨೭, ೨೦೧೩.

ಕವಿ ಗೋಷ್ಠಿಯಲ್ಲಿ ಪ್ರಸ್ತುತಿಯ ಆಯ್ಕೆಯ ಬಗ್ಗೆ ನಮ್ಮ ನಿರ್ಧಾರವೇ ಅಂತಿಮ.

ನಿಮ್ಮ ರಚನೆಯನ್ನು ಈ ಕೆಳ ಕಂಡ ವಿಳಾಸಕ್ಕೆ ಈಮೇಲ್ ಮಾಡಿ.

nmaiya@gmail.com

ಸಮ್ಮೇಳನದ ಬಗೆಗಿನ ಹೆಚ್ಚಿನ ವಿವರಗಳು ಇಲ್ಲಿವೆ:-

http://kannadavrinda.org/Conference/Default.aspx

ಇತಿ,
ವಿಶ್ವಾಸಪೂರ್ವಕ,
ನಳಿನಿ ಮೈಯ

 Posted by at 9:57 AM